ಕೌಕ್ರಾಡಿ: ಜಮೀನು ವಿಚಾರದಲ್ಲಿ ಹಲ್ಲೆ ಪ್ರಕರಣ – ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಪುತ್ತೂರು:ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣದ ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೌಕ್ರಾಡಿ ನಿವಾಸಿಗಳಾದ ಮೊಹಮ್ಮದ್ ಬಾವ, ಇಸ್ಮಾಯಿಲ್, ಹ್ಯಾರೀಸ್, ಯೂಸೂಫ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.‌ ಜಮೀನಿಗೆ ಸಂಬಂಧಿಸಿ ಪುತ್ತೂರು ಸಿವಿಲ್ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದ್ದರೂ ಮಾ.2ರಂದು ಆರೋಪಿಗಳು ದೂರುದಾರ ಸಹಜಾನ್, ಅವರ ಗಂಡ ಅಬ್ದುಲ್ ಗಫೂರ್ ಅವರಿಗೆ ಹಲ್ಲೆ ನಡೆಸಿ, ಅವರ ಮಕ್ಕಳಿಗೆ ಆಶ್ಲೀಲ ಭಂಗಿಯನ್ನು ಪ್ರದರ್ಶಿಸಿ ಮಾನಸಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ವಾದಿಸಿದ್ದರು.

LEAVE A REPLY

Please enter your comment!
Please enter your name here