ಮೊಟ್ಟೆತ್ತಡ್ಕ ಮಜಲು ಕ್ಷೇತ್ರದಲ್ಲಿ ದೈವಗಳಿಗೆ ಸಂಕ್ರಮಣ ಕೋಲ,ಅಗೇಲು ಸೇವೆ

0

ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಸಂಕ್ರಮಣದಂಗವಾಗಿ ಮೇ 15ರಂದು ರಾತ್ರಿ ದೈವಗಳಿಗೆ ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಆರಂಭದಲ್ಲಿ ಕೆಂಡ ದರ್ಶನ ಸೇವೆಯಾಗಿ ಬಳಿಕ ಅಗ್ನಿ ಕಲ್ಲುರ್ಟಿ, ಸ್ವಾಮಿ ಕೊರಗಜ್ಜ ದೈವದ ಕೋಲ, ಅಗೇಲು ಸೇವೆ ನಡೆಯಿತು. ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here