ಬೆಟ್ಟಂಪಾಡಿ: ಪತ್ತನಾಜೆ ಜಾತ್ರೆಗೆ ಗೊನೆ ಮುಹೂರ್ತ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಜಾತ್ರೋತ್ಸವಗಳ ಕೊನೆಯ ದಿನ ಪತ್ತನಾಜೆ ಜಾತ್ರೆಯು ಮೇ 25 ರಂದು ನಡೆಯಲಿದೆ. ಅದರ ಗೊನೆಮುಹೂರ್ತ ಕಾರ್ಯಕ್ರಮ ಮೇ 18 ರಂದು ದೇವಾಲಯದಲ್ಲಿ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇ.ಮೂ. ವೆಂಕಟ್ರಮಣ ಭಟ್ ಕಾನುಮೂಲೆ ಸನ್ನಿಧಾನದಲ್ಲಿ ಪ್ರಾರ್ಥಿಸಿದರು. ಅರ್ಚಕ ನಾರಾಯಣ ಭಟ್ ಕಾನುಮೂಲೆ, ಸಹಾಯಕ ಅರ್ಚಕರಾದ ಸುಬ್ರಹ್ಮಣ್ಯ ಭಟ್ ತಲೆಪ್ಪಾಡಿ, ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಕಚೇರಿ ಕ್ಲರ್ಕ್ ವಿನಯ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here