ಪುತ್ತೂರು ಡಿವೈಎಸ್ಪಿ ಕಚೇರಿಗೆ ಎಸ್ಪಿ, ಎಡಿಷನಲ್ ಎಸ್ಪಿ ಭೇಟಿ-ಹಿಂದೂ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪದ ವಿಚಾರಣೆ !

0

ಪುತ್ತೂರು: ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಎಸ್ಪಿ ಡಾ. ಅಮಟೆ ವಿಕ್ರಂ ಮತ್ತು ಎಡಿಷನಲ್ ಎಸ್ಪಿ ಕುಮಾರ್ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.


ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ ಅವರಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿತ್ತು. ಈ ನಡುವೆ ಗಾಯಗೊಂಡ ಹಿಂದೂ ಯುವಕರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನಮಗೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದಂತೆ ಹಿಂದೂ ಸಂಘಟನೆಯ ಮತ್ತು ಪಕ್ಷದಿಂದ ತೀವ್ರ ಪೊಲೀಸರ ನಡವಳಿಕೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಇದೀಗ ಪೊಲೀಸ್ ದೌರ್ಜನ್ಯವನ್ನು ವಿಚಾರಿಸಲು ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಅವರು ಪುತ್ತೂರು ಪೊಲೀಸ್ ಠಾಣೆ ಮತ್ತು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here