ದರೋಡೆ ಯತ್ನ ಪ್ರಕರಣ; ಆರೋಪಿಗೆ ಜಾಮೀನು ಮಂಜೂರು

0

ಪುತ್ತೂರು: 5 ವರ್ಷಗಳ ಹಿಂದೆ ನಡೆದಿದ್ದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ವಾರಂಟ್ ಮೂಲಕ ಬಂಧನಕ್ಕೊಳಗಾಗಿದ್ದ ಆರೋಪಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2018ರ ಮಾ.4ರಂದು ದಾರಂದಕುಕ್ಕುವಿನಲ್ಲಿ ಪೊಲೀಸ್ ತಪಾಸಣೆ ವೇಳೆ ಅದೇ ರಸ್ತೆಯಾಗಿ ದರೋಡೆ ಮಾಡಲೆಂದು ಕಾರಿನಲ್ಲಿ ಬಂದಿದ್ದ 7 ಮಂದಿ ಬಂಧಿತರಾಗಿದ್ದರು. ಪ್ರಕರಣದ ವಿಚಾರಣೆ ಸಂದರ್ಭ ಆರೋಪಿಗಳ ಪೈಕಿ ಉಡುಪಿಯ ಮಂದಾರ್ತಿ ನಿವಾಸಿ ವಿಜಯ ಶೆಟ್ಟಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಆರೋಪಿ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ವಾದಿಸಿದರು.

LEAVE A REPLY

Please enter your comment!
Please enter your name here