ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ

0

ಕಾಣಿಯೂರು:ಕಡಬ ತಾಲೂಕು ಕಾಣಿಯೂರು ಗ್ರಾಮದ ಕಾಣಿಯೂರು ಪೇಟೆಯ ಕೂಗಳತೆ ದೂರದಲ್ಲಿ ಹಚ್ಚ ಹಸುರಿನ ಪ್ರಕೃತಿ ಮಧ್ಯೆ ಎರಡು ದಶಕಗಳ ಹಿಂದೆ ಪ್ರಾರಂಭಗೊಂಡ ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಪ್ರಸ್ತುತ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸರ್ವೆತೋಮುಖ ಬೆಳವಣಿಗೆಗೆ ಆದ್ಯತೆ ನೀಡುವುದರಿಂದ ಶೈಕ್ಷಣಿಕ ಕ್ರಾಂತಿಯನ್ನು ಉಂಟುಮಾಡಿದೆ.

ಕಾಣಿಯೂರು -ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಮಗ್ಗುಲರುವ ಕಾಣಿಯೂರಿನಲ್ಲಿ 2 ದಶಕಗಳ ಹಿಂದೆ ಕೆಲವೇ ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡ ಈ ವಿದ್ಯಾಸಂಸ್ಥೆಯಲ್ಲಿ ಪ್ರಸ್ತುತ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ. ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರ ಕಲ್ಪನೆ ತಕ್ಕಂತೆ ಬೋಧಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾಣಿಯೂರು ಮಾತ್ರವಲ್ಲದೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಾ ಇದ್ದಾರೆ. ದೂರದ ಊರಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ಹಾಸ್ಟೇಲ್‌ನ ವ್ಯವಸ್ಥೆ, ಸುಳ್ಯ, ಕಡಬ, ಪುತ್ತೂರು ತಾಲೂಕು ವ್ಯಾಪ್ತಿಯಿಂದ ಬರುವ ವಿದ್ಯಾರ್ಥಿಗಳಿಗಾಗಿ ಶಾಲಾ ವಾಹನದ ವ್ಯವಸ್ಥೆಗಳು ಇದೆ. ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಸಾಂಸ್ಕೃತಿಕ, ಕಲೆ, ಸಾಹಿತ್ಯ, ಕ್ರೀಡೆ, ಯೋಗ, ಯಕ್ಷಗಾನ, ಕರಾಟೆ, ಭರತನಾಟ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಲು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಏಕಕಾಲದಲ್ಲಿ ಮೂರು ಸಾವಿರ ಮಂದಿ ಕುಳಿತುಕೊಳ್ಳಬಹುದಾದ ಹೊರಗಿನ ಸಭಾಂಗಣವಿದೆ.
ಮಕ್ಕಳ ಶೈಕ್ಷಣಿಕ ಪ್ರಗತಿ, ಅಂಕಗಳಿಗೆ ಮಾತ್ರ ಸೀಮಿತಗೊಳಿಸದೇ ಶಿಕ್ಷಣದ ಜೊತೆಗೆ ಪ್ರಶಾಂತವಾದ ವಾತಾವರಣದಲ್ಲಿ ಕಲಿಕೆಗೆ ಪೂರಕವಾದ ಸಂಸ್ಕಾರ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ, ಭರತನಾಟ್ಯ, ಯಕ್ಷಗಾನ ಮತ್ತು ಜನಪದ ನೃತ್ಯ ತರಗತಿಗಳು ಇನ್ನಿತರ ಚಟುವಟಿಕೆಗಳಲ್ಲಿಯೂ ಮಕ್ಕಳನ್ನು ತೊಡಗಿಸಿಕೊಳ್ಳುತ್ತಿರುವುದು ಇಲ್ಲಿಯ ವಿಶೇಷ. ನಿರಂತರ 24 ಗಂಟೆಗಳ ಸೋಲಾರ್ ವಿದ್ಯುತ್ ಸೌಲಭ್ಯ, ಆಧುನಿಕ ಶಿಕ್ಷಣದಲ್ಲಿ ಸ್ಮಾರ್ಟ್ ಕ್ಲಾಸ್ ಅಳವಡಿಸಿಕೊಳ್ಳಲಾಗಿದೆ.

ದಾಖಲೆಯ ಫಲಿತಾಂಶ: ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಆಂಗ್ಲ ಮತ್ತು ಕನ್ನಡ ಮಾಧ್ಯಮದ ವಿಭಾಗದಲ್ಲಿ ಪ್ರತಿ ವರ್ಷವೂ ಅತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಸಾಗುತ್ತಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗದಲ್ಲಿ 20 ವರುಷಗಳಿಂದ ನಿರಂತರವಾಗಿ ಉತ್ತಮವಾದ ಅಂಕಗಳೊಂದಿಗೆ ಶೇ 100 ಫಲಿತಾಂಶ ಪಡೆಯುತ್ತಿದೆ. ಕನ್ನಡ ಮಾಧ್ಯಮ ವಿಭಾಗದಲ್ಲೂ 13 ಬಾರಿ ನೂರು ಶೇ ಫಲಿತಾಂಶವನ್ನು ಗಳಿಸಿಕೊಂಡ ಹೆಗ್ಗಳಿಕೆಯಿದೆ. ಇಲ್ಲಿನ ವಿದ್ಯಾರ್ಥಿಗಳು ಕಬಡ್ಡಿ, ಯೋಗ, ಕರಾಟೆ, ಚೆಸ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ.

ಗ್ರಾಮೀಣ ಪ್ರದೇಶವಾದ ಕಾಣಿಯೂರಿನಲ್ಲಿ ಸಮಾಜಕ್ಕೆ ಉನ್ನತ ಮಟ್ಟದ ವಿದ್ಯಾಭ್ಯಾಸ ಹಾಗೂ ಕ್ರೀಡಾಕ್ಷೇತ್ರದಲ್ಲಿ ಸಮಾಜವನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ 1993ರಲ್ಲಿ ಪ್ರಾರಂಭಿಸಿದ ಪ್ರಗತಿ ವಿದ್ಯಾಸಂಸ್ಥೆಯು ಬೆಳ್ಳಿಹಬ್ಬದ ಸಂಭ್ರಮವನ್ನು ಆಚರಿಸಿಕೊಂಡಿದೆ. ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ನಮ್ಮ ಸಂಸ್ಥೆ ಸರಿಸಮನಾಗಿ ಗುರುತಿಸಲ್ಪಡಲು ಇಲ್ಲಿನ ಶೈಕ್ಷಣಿಕ ವ್ಯವಸ್ಥೆ ಹಾಗು ಸಂಸ್ಥೆಯ ಫಲಿತಾಂಶ ಕಾರಣವಾಗಿದೆ. ಅದಕ್ಕಾಗಿ ಎಲ್ಲಾ ವಿದ್ಯಾರ್ಥಿಗಳನ್ನ, ಶಿಕ್ಷಕರನ್ನು ಪ್ರೋತ್ಸಾಹಿಸಿದ ಪೋಷಕರನ್ನು ಹಿತೈಷಿಗಳನ್ನು, ಹಿರಿಯ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿದ್ದೇವೆ.
ಜಯಸೂರ್ಯ ರೈ ಮಾದೋಡಿ, ಸಂಚಾಲಕರು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು

LEAVE A REPLY

Please enter your comment!
Please enter your name here