ಗೋಳಿತ್ತಡಿ: ಯುವಕ ಆತ್ಮಹತ್ಯೆ

0


ರಾಮಕುಂಜ: ರಾಮಕುಂಜ ಗ್ರಾಮದ ಗೋಳಿತ್ತಡಿ ದಿ.ಕುಟಿತ ಅವರ ಪುತ್ರ ರವಿ(38ವ.) ಅವರು ಮೇ 18ರಂದು ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ರವಿ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನೆರೆ ಮನೆಗೆ ಹೋಗಿದ್ದ ಪತ್ನಿ ಮನೆಗೆ ಬಂದ ವೇಳೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ. ಮೃತ ರವಿ ಪತ್ನಿ, ಸಹೋದರ ರಮೇಶ ಅವರನ್ನು ಅಗಲಿದ್ದಾರೆ. ಮೃತರ ಮನೆಗೆ ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಸದಸ್ಯರಾದ ಯತೀಶ್‌ಕುಮಾರ್ ಬಾನಡ್ಕ, ಕೇಶವ ಗಾಂಧಿಪೇಟೆ, ಗೋಳಿತ್ತಡಿ ಬ್ರಹ್ಮಶ್ರೀ ಚಿಕನ್ ಸೆಂಟರ್‌ನ ಹರೀಶ್, ಸಂಜೀವ ಪೂಜಾರಿ ಅಂಬ ಮತ್ತಿತರರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here