(ನಾಳೆ) ಮೇ.21- ಇರ್ದೆ ದೇವಾಲಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ- ಧಾರ್ಮಿಕ ಪ್ರವಚನ

0

ಪುತ್ತೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣು ಮೂರ್ತಿ ದೇವಾಲಯ ಇರ್ದೆ ಇವುಗಳ ಆಶ್ರಯದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ, ಅಜ್ಜಿಕಲ್ಲು, ಅಜಲಡ್ಕ, ರೆಂಜ, ಕಕ್ಕೂರು, ಚೂರಿಪದವು ಇವುಗಳ ಸಹಕಾರದೊಂದಿಗೆ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವೇದ ಮೂರ್ತಿ ಶ್ರೀ ರಾಧಾಕೃಷ್ಣ ಭಟ್ ಕಕ್ಕೂರು ಇವರ ಪೌರೋಹಿತ್ಯದಲ್ಲಿ  ನಡೆಯುವ ಧಾರ್ಮಿಕ ಪ್ರವಚನ ಕಾರ್ಯಕ್ರಮ ಮೆ.21 ರಂದು ಬೆಳಿಗ್ಗೆ ಗಂಟೆ 9 ರಿಂದ ಇರ್ದೆ ಶ್ರೀ ವಿಷ್ಣು ಮೂರ್ತಿ ದೇವಾಲಯದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9ರಿಂದ ಪೂಜೆ ಪ್ರಾರಂಭ. ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ, 12.30 ರಿಂದ ಧಾರ್ಮಿಕ ಪ್ರವಚನ ಮತ್ತು ಕಳೆದ ವರ್ಷದ ಲೆಕ್ಕ ಪತ್ರ ಮಂಡನೆ. ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಪೂಜಾ ಸಮಿತಿ ಅಧ್ಯಕ್ಷ ಪುರಂದರ ಗೌಡ ಮತ್ತು ಕಾರ್ಯದರ್ಶಿ ಮೋಹನ ಚಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here