ಪುತ್ತೂರುಗೆ ಮತ್ತೆ ಡಿವೈಎಸ್ಪಿಯಾಗಿ ಡಾ. ಗಾನ ಪಿ. ಕುಮಾರ್ ಆಗಮನ ಸಾಧ್ಯತೆ

0

ಪುತ್ತೂರು: ಪೊಲೀಸ್ ಇಲಾಖೆಯ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ಡಾ. ಗಾನಾ ಪಿ. ಕುಮಾರ್ ಮತ್ತೆ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆ ಇದೆ.
ಪ್ರಸ್ತುತ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಡಿ.ಸಿ.ಆರ್.ಬಿ. ವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ಮಂಗಳೂರಿನಲ್ಲಿರುವ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿಸ್ಟ್ರಿಕ್ಟ್ ಕ್ರೈಮ್ ರೆಕಾರ್ಡ್ ಬ್ಯೂರೋದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಮತ್ತೆ ಪುತ್ತೂರು ಡಿವೈಎಸ್ಪಿಯಾಗಿ ನೇಮಿಸಲು ಪೊಲೀಸ್ ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದು ಇನ್ನಷ್ಟೇ ಆದೇಶವಾಗಬೇಕಿದೆ. ಪುತ್ತೂರಿನಲ್ಲಿ ಎರಡು ವರ್ಷ ಡಿವೈಎಸ್ಪಿಯಾಗಿದ್ದ ಡಾ. ಗಾನಾ ಕುಮಾರ್ ಅವರನ್ನು ಸಿಐಡಿ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಬಳಿಕ ವರ್ಗಾವಣೆ ರದ್ದುಗೊಳಿಸಿ ಎಸ್ಪಿ ಕಛೇರಿಯ ಡಿ.ಸಿ.ಆರ್.ಬಿ. ಡಿವೈಎಸ್ಪಿಯನ್ನಾಗಿ ನಿಯೋಜಿಸಲಾಗಿತ್ತು. ಪುತ್ತೂರು ಡಿವೈಎಸ್ಪಿಯಾಗಿ ಡಾ. ವೀರಯ್ಯ ಹಿರೇಮಠ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿರುವ ಡಾ. ವೀರಯ್ಯ ಹಿರೇಮಠ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದ್ದು ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ. ಖಾಯಂ ಡಿವೈಎಎಸ್ಪಿಯಾಗಿ ಡಾ.‌ಗಾನಾ ಪಿ. ಕುಮಾರ್ ಅವರನ್ನು ಪುತ್ತೂರಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳು ತೀರ್ಮಾನಿಸಿದ್ದು ಅಧಿಕೃತ ಆದೇಶ ಪ್ರಕಟವಾಗಬೇಕಿದೆ.

LEAVE A REPLY

Please enter your comment!
Please enter your name here