ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0

ಪುತ್ತೂರು: ಲೋಕಕಲ್ಯಾಣಾರ್ಥ ಮತ್ತು ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪ್ರಾರ್ಥಿಸಿಕೊಂಡಂತೆ ಮೇ.22ರಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸೀಯಾಳಾಭಿಷೇಕ ನಡೆಯಿತು.


ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಸಂಕಲ್ಪ ಕಾರ್ಯಕ್ರಮ ನೆರವೇರಿಸಿ, ಮಧ್ಯಾಹ್ನ ಮಹಾಪೂಜೆಯ ಸಂದರ್ಭ ಪ್ರಾರ್ಥನೆ ನೆರವೇರಿಸಿದರು. ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ನೀಲಂತ್ ಬೊಳುವಾರು, ಶ್ರೀನಿವಾಸ್ ಕುಲಾಲ್, ಸಹಿತ ಸಮಿತಿ ಪ್ರಮುಖರು, ಮೋಹನ್ ರೈ ನರಿಮೊಗರು, ಅಶ್ವಿನಿ ಪ್ರಸಾದ್, ರವೀಂದ್ರನಾಥ ರೈ ನುಳಿಯಾಲು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ಅಜಿತ್ ರೈ ಹೊಸಮನೆ, ಸಂತೋಷ್ ರೈ ಕೈಕಾರ, ದಿನೇಶ್ ಪಂಜಿಗ, ಗೋಪಾಲ್, ಸುನಿಲ್, ನಾರಾಯಣ ಆದರ್ಶ, ಉದಯ ಆದರ್ಶ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here