ಪೊಲೀಸ್ ದೌರ್ಜನ್ಯ ಪ್ರಕರಣ: ಗಾಯಾಳು ಯುವಕರಿಗೆ ಸಾಂತ್ವನ ಹೇಳಿದ ನಟಿ ಹರ್ಷಿಕಾ ಪೂಣಚ್ಚ

0

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸರಿಂದ ಥಳಿತಕ್ಕೊಳದ ಹಿಂದೂ ಸಂಘಟನೆಯ ಕಾರ್ಯಕರ್ತ ಅವಿನಾಶ್ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬಹುಭಾಷ ಚಿತ್ರ ನಟಿ ಹರ್ಷಿಕಾ ಪೂಣಚ್ಚ ಮಹಾವೀರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಮತ್ತು ಬೇಗ ಗುಣಮುಖರಾಗಿ ಬನ್ನಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಇದೇ ವೇಳೆ ಅವಿನಾಶ್ ಹೆತ್ತವರಿಗೂ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ವೇಳೆ ಎಸ್ ಎಲ್ ವಿ ಗ್ರೂಪ್ ನ ಮಾಲಕ ದಿವಾಕರ್ ದಾಸ್ ನೇರ್ಲಾಜೆ, ಚಿತ್ರ ನಿರ್ದೇಶಕ ವಿನು ಬಳಂಜ, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು ಮತ್ತಿತರ ಪ್ರಮುಖರು ಉಪಸ್ಥಿತರಿದ್ದು ಗಾಯಾಳು ಯುವಕರಿಗೆ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here