ದ.ಕ ಎಸ್ಪಿ ಭೇಟಿಯಾದ ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಕ್ರೈಮ್ ಮೀಟಿಂಗ್ ಗೆ ಸಂಬಂಧಿಸಿದಂತೆ ಪುತ್ತೂರಿಗೆ ಆಗಮಿಸಿದ ದ.ಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಪುತ್ತೂರು ನಗರ ಠಾಣೆಯಲ್ಲಿ ಎಸ್ಪಿ ಅವರನ್ನು ಭೇಟಿಯಾದ ಅರುಣ್‌ ಪುತ್ತಿಲ ಬ್ಯಾನರ್‌ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರಿಂದ ಹಲ್ಲೆಗೊಳಗಾದ ಕಾರ್ಯಕರ್ತರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಆದರೆ ಮಾತುಕತೆಯ ವಿವರ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here