ಕೆಯ್ಯೂರು: ಎಟ್ಯಡ್ಕ ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

0

ಪುತ್ತೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ನಷ್ಟ ಉಂಟಾದ ಘಟನೆ ಕೆಯ್ಯೂರು ಗ್ರಾಮದ ಎಟ್ಯಡ್ಕದಿಂದ ವರದಿಯಾಗಿದೆ. ಮೇ.23 ರಂದು ಸಂಜೆ ಬೀಸಿದ ಭಾರೀ ಗಾಳಿ,ಮಳೆ ಸಿಡಿಲಿಗೆ ಎಟ್ಯಡ್ಕ ಕೃಷ್ಣಪ್ಪ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ.

ಸಿಡಿಲು ಬಡಿದ ಪರಿಣಾಮ ಮನೆಯ ಹಂಚು ಹುಡಿಯಾಗಿದ್ದು, ಗೋಡೆ ಬಿರುಕು ಬಿಟ್ಟಿದೆ. ವಿದ್ಯುತ್ ಮೈನ್ ಸ್ವಿಚ್ ಬೋರ್ಡ್ ಸಹಿತ ವಯರಿಂದ ಸಂಪೂರ್ಣ ಸುಟ್ಟು ಹೋಗಿದೆ. ಟಿ.ವಿ, ಮಿಕ್ಸಿ, ಗ್ಯಾಸ್ ಸ್ಟವ್ ಸಹಿತ ಎಲೆಕ್ಟ್ರಾನಿಕ್ಸ್ ವಸ್ತುಗಳು ಸಂಪೂರ್ಣ ಹಾಳಾಗಿವೆ. ಸುಮಾರು 50 ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದ್ದು ಮನೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಜೀವ ಹಾನಿ ಸಂಭವಿಸಿಲ್ಲ ಎಂದು ಕೃಷ್ಣಪ್ಪ ಪೂಜಾರಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here