ಈಶ್ವರಮಂಗಲ: ನೆಲ್ಲಿತ್ತಡ್ಕದಲ್ಲಿ ಗಾಳಿಗೆ ರಸ್ತೆಗೆ ಬಿದ್ದ ಮರ

0

ಪುತ್ತೂರು: ಮೇ.23ರಂದು ಸಂಜೆ ಸುರಿದ ಭಾರೀ ಮಳೆ ಗಾಳಿಗೆ ಈಶ್ವರಮಂಗಲ ಸಮೀಪದ ನೆಲ್ಲಿತ್ತಡ್ಕ, ಸಾಂತ್ಯ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಮರ ಬಿದ್ದು ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ನಡೆದಿದೆ. ಕಾವು ಈಶ್ವರಮಂಗಲ ರಸ್ತೆಯ ನೆಲ್ಲಿತ್ತಡ್ಕದಲ್ಲಿ ಮಳೆ ಗಾಳಿಗೆ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ವಿದ್ಯುತ್ ತಂತಿ ತುಂಡಾಗಿ ಮರ ರಸ್ತೆಗುರುಳಿದೆ. ವಿದ್ಯುತ್ ಕಂಬಗಳಿಗೂ ಹಾನಿಯುಂಟಾಗಿದೆ. ಇದರಿಂದ ಸುಮಾರು ಎರಡು ತಾಸುಗಳ ಸಮಯ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಬಳಿಕ ಪೊಲೀಸ್ ಇಲಾಖೆ, ಮೆಸ್ಕಾಂ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಸಿ ಸಂಚಾರ ಸುಗಮಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here