ಕೊಕ್ಕಡ-ಬೈಕ್-ಕಾರು ನಡುವೆ ಅಪಘಾತ-ಗಾಯಾಳು ಗೋಳಿತ್ತೊಟ್ಟು ನಿವಾಸಿ ಅಶೋಕ್ ಮೃತ್ಯು

0

ನೆಲ್ಯಾಡಿ : ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಳಿತ್ತೊಟ್ಟು ಸಮೀಪದ ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ, ಅಶೋಕ್ (38ವ.) ಅವರು ಮೇ 24ರಂದು ಬೆಳಿಗ್ಗೆ ಮೃತ ಪಟ್ಟಿದ್ದಾರೆ.

ಮೃತ ಬೈಕ್ ಸವಾರ ಅಶೋಕ್ ಅವರು ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕನಾಗಿದ್ದು ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಧರ್ಮಸ್ಥಳದಿಂದ ಉಪ್ಪಾರಪಲಿಕೆ ಮಾರ್ಗವಾಗಿ ಮನೆಗೆ ಬರುತ್ತಿದ್ದ ವೇಳೆ ಕಾರೊಂದು ಡಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡಿದ್ದ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೇ.24 ರಂದು ಅಸುನೀಗಿದ್ದಾರೆ. ಮೃತರು ತಂದೆ ಮೋನಪ್ಪ ಗೌಡ, ತಾಯಿ, ಪತ್ನಿ ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸದಸ್ಯೆ ಶೃತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here