ಮಾಣಿ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟ – ಬಜರಂಗದಳ ಎಚ್ಚರಿಕೆ

0

ಪುತ್ತೂರು: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಮಾಣಿಯಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂದಿಸಿ ನಿಜವಾದ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ಬಜರಂಗದಳ ಉಗ್ರ ಹೋರಾಟ ಮಾಡಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಎಚ್ಚರಿಕೆ ನೀಡಿದ್ದಾರೆ.


ಹಿಂದು ಸಮಾಜದ ಮೇಲೆ ಗೂಂಡಾ ರಾಜಕಾರಣ ಸಹಿಸುವುದಿಲ್ಲ. ಇವತ್ತು ರಾಜಕೀಯ ವ್ಯವಸ್ಥೆ ಬದಲಾದ ಕೂಡಲೆ ಈ ರೀತಿ ಸಮಾಜದ ಮೇಲೆ ದಾಳಿಯಾಗುವಾಗ ಇದಕ್ಕೆ ಹಿಂದೂ ಸಮಾಜ ಸರಿಯಾದ ಉತ್ತರ ನೀಡಲಿದೆ. ಮಾಣಿ ಜಂಕ್ಷನ್‌ನಂತಹ ಜಾಗದಲ್ಲಿ ಈ ರೀತಿಯ ಘಟನೆಗಳು ಸಂಭವಿಸಿದೆ. ಪೊಲೀಸರು ಗಂಭೀರವಾಗಿ ತಕ್ಷಣ ನಿಜವಾದ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾದಿತು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here