ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

 ವಿಟ್ಲ : ಮಾಣಿಯ ಪರಾಜೆ ವಿದ್ಯಾನಗರದಲ್ಲಿರುವ   ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ  10ನೇ ತರಗತಿಯ  ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

 ಬಾಲ ವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್  ಜೆ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ತಮ್ಮ ಔದ್ಯೋಗಿಕ ಬದುಕಿನಲ್ಲಿ  ಯಶಸ್ಸು ಕಾಣುವುದರೊಂದಿಗೆ ಉತ್ತಮ ಪ್ರಜೆಗಳಾಗಿ ಬಾಳಬೇಕು. ಮುಂದಿನ ದಿನಗಳಲ್ಲಿ ಇನ್ಮಷ್ಟು ಹೆಚ್ಚಿನ ಸಾಧನೆಯನ್ನು ಮಾಡುವ ಕೆಲಸ ನಿಮ್ಮಿಂದ ಆಗಲಿ  ಎಂದರು.

ಶಾಲೆಯ ಆಡಳಿತಾಧಿಕಾರಿಯಾದ  ರವೀಂದ್ರ ದರ್ಬೆಯವರು ಮಾತನಾಡಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪೋಷಕರು  ಶಾಲೆಯೊಂದಿಗೆ ಉತ್ತಮ ಬಾಂಧವ್ಯವನ್ನು ಭವಿಷ್ಯದ ದಿನಗಳಲ್ಲಿ ಇಟ್ಟುಕೊಳ್ಳುವಂತೆ ಆಶಿಸಿದರು. 

 ಮಕ್ಕಳ ಪೋಷಕರ ಪರವಾಗಿ ಗಣೇಶ ಐತಾಳ್ ಮಾತನಾಡಿದರು.  ಇದೇ ಸಂದರ್ಭದಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು  ಗುರುತಿಸಲಾಯಿತು.

 ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಶೋಭಾ ಎಂ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.   ಸುಧಾ. ಎನ್. ರಾವ್ ವಂದಿಸಿದರು.

LEAVE A REPLY

Please enter your comment!
Please enter your name here