ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಅಭಿನಂದನಾ ಸಮಾರಂಭ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಮೇ 25ರಂದು ದ್ವಿತೀಯ ಪಿ.ಯು.ಸಿ ಹಾಗೂ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಜೆ.ಇ.ಇ ಯಲ್ಲಿ 37ನೇ ರ್‍ಯಾಂಕ್ ಪಡೆದ ಆಶ್ರಯದತ್ತ , 192 ನೇ ರ್‍ಯಾಂಕ್ ಗಳಿಸಿದ ಶ್ರೀಹರಿ ಐ.ಬಿ, ದ್ವಿತೀಯ ಪಿಯುಸಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಆಶಿಕಾ ಎಂ ಹಾಗೂ
ಹತ್ತನೇ ತರಗತಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ವಿಷ್ಣುಪ್ರಸಾದ್ ಇವರನ್ನು ತಮ್ಮ ಪಾಲಕರೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಸಂಚಾಲಕ ಯು.ಜಿ.ರಾಧ ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಶೀಲರಾಗಿ ಯಶಸ್ಸನ್ನು ಸಾಧಿಸುವ ಮೂಲಕ ತಮ್ಮ ಗುರಿಯನ್ನು ತಲುಪುಂತೆ ಶುಭ ಹಾರೈಸಿದರು.

ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಸಾಧಕ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ಪಾಲಕರ ಪರ ಚಂದ್ರಶೇಖರ್ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ , ಆಡಳಿತ ಮಂಡಳಿ ಸದಸ್ಯರು, ಪಾಲಕರು, ಉಪನ್ಯಾಸಕರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಕೆ.ಪ್ರಕಾಶ್ ಸ್ವಾಗತಿಸಿ, ಸಹಶಿಕ್ಷಕಿ ಶಶಿಕಲಾ ವಂದಿಸಿ, ಉಪನ್ಯಾಸಕಿ ಸ್ವಾತಿ, ಸಹ ಶಿಕ್ಷಕಿ ಸುಪ್ರೀತಾ ನಿರೂಪಿಸಿದರು.

LEAVE A REPLY

Please enter your comment!
Please enter your name here