ವಿಶ್ವ ಥೈರಾಯಿಡ್ ದಿನ- ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೇಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್ ನ ವತಿಯಿಂದ ವಿಶ್ವ ಥೈರಾಯಿಡ್ ದಿನದಂಗವಾಗಿ ಡಾ.ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ಮೇ 25 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ ನಡೆಯಿತು.


ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತ, ದೇಹದ ಉಷ್ಣತೆ,, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಂಡು ವೈದ್ಯರಾದ ಡಾ.ನಝೀರ್ ಅಹಮದ್ ರವರಲ್ಲಿ ಸೂಕ್ತ ಸಲಹೆಯನ್ನು ಪಡೆದುಕೊಂಡರು.
ಎಸ್.ಆರ್.ಎಲ್ ಲ್ಯಾಬ್ ನ ಚಂದ್ರಕಲಾ, ಮೆರ್ಕ್ ಕಂಪೆನಿ, ಡಾ.ನಝೀರ್ ಅಹಮದ್ ಡಯಾಬೆಟ್ಸ್ ಸೆಂಟರ್ ನ ಸಿಬ್ಬಂದಿ ಸಹಕರಿಸಿದರು.

28 ಮಂದಿ ಫಲಾನುಭವಿಗಳಿಗೆ ಥೈರಾಯ್ಡ್ ಪರೀಕ್ಷೆ ನಡೆಸಲಾಯಿತು.

LEAVE A REPLY

Please enter your comment!
Please enter your name here