ನೆಲ್ಯಾಡಿ: ಉಪನ್ಯಾಸಕ ವಿಶ್ವನಾಥ ಶೆಟ್ಟಿಯವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

0

ನೆಲ್ಯಾಡಿ: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಬಹುಮುಖ ಪ್ರತಿಭೆಯ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಕಲಾವಿದ ವಿಶ್ವನಾಥ್ ಶೆಟ್ಟಿ ಕೆ. ಅವರಿಗೆ ಮೇ 25ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ| ಮಹೇಶ್ ಜೋಷಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಟಿ.ಎಸ್.ನಾಗಾಭರಣ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಹೆಚ್.ಎಲ್.ಎನ್ ರಾವ್‌ರವರ ಸಮಕ್ಷಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here