ಸವಣೂರು ಸಿ.ಎ, ಬ್ಯಾಂಕ್ ನಿರ್ದೇಶಕ ಕರುಣಾಕರ ಪೂಜಾರಿ ಪಟ್ಟೆ ನಿಧನ

0

ಪುತ್ತೂರು: ಸವಣೂರು ಸಿ.ಎ.ಬ್ಯಾಂಕ್ ನಿರ್ದೇಶಕ ಕರುಣಾಕರ ಪೂಜಾರಿ ಪಟ್ಟೆ (50 ವ) ಮೇ 27 ರಂದು ಅಲ್ವ ಕಾಲದ ಅಸೌಖ್ಯದಿಂದ ಬೆಳಿಗ್ಗೆ ನಿಧನರಾದರು.

ಕರುಣಾಕರ ಪೂಜಾರಿರವರು ಬೆಳಂದೂರು ಗ್ರಾ.ಪಂ. ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಸವಣೂರು ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಾಗಿ, ಸವಣೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು.ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರಾಗಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ್ದಾರೆ. ಮೃತರು ತಾಯಿ ಚೆನ್ನಮ್ಮ, ಪತ್ನಿ ಗೀತಾ, ಪುತ್ರಿಯರಾದ ಕವನ, ಕೀರ್ತನಾ, ಪುತ್ರ ಯಶಸ್ ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here