ಉಪ್ಪಿನಂಗಡಿ ಮೂರ್ತೆದಾರರ ಸೇ.ಸ. ಸಂಘ- ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರಿ

0

ಉಪ್ಪಿನಂಗಡಿ : ಮೂರ್ತೇದಾರರ ಸೇವಾ ಸಹಕಾರಿ ಸಂಘ ಉಪ್ಪಿನಂಗಡಿ ಇದರ ನೂತನ ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಹಿಂದಿನ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ ಇವರ ರಾಜೀನಾಮೆಯಿಂದ ತೆರವಾದ ಹುದ್ದೆಗೆ ಮೇ 24ರಂದು ಸಂಘದ ಉಪ್ಪಿನಂಗಡಿ ಪ್ರಧಾನ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಪುತ್ತೂರು ಸಹಕಾರ ಸಂಘಗಳ ನಿಬಂಧಕರ ಕಚೇರಿಯ ಶೋಭಾ ಇವರು ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ ಸಹಕರಿಸಿದರು.

ಸಂಘದ ನಿರ್ದೇಶಕರುಗಳಾದ ಡಾ.ರಾಜಾರಾಮ್ ಕೆ.ಬಿ, ಮಾಧವ ಆರಿಜಾಲು, ಶೀನಪ್ಪ ಪೂಜಾರಿ, ಚೆನ್ನಪ್ಪ ಪೂಜಾರಿ, ಶಶಿಧರ್, ಚಂದ್ರಶೇಖರ ಬಾಣಜಾಲು, ಸುನೀತಾ ಹಾಗೂ ಚಂದ್ರಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here