ಅಕ್ರಮ ಮದ್ಯ ಸಾಗಾಟ: ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು: ದ್ವಿಚಕ್ರ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನೆಟ್ಟಣಿಗೆ ಮುಡ್ನೂರು ಪಲ್ಲತ್ತೂರು ಎಂಬಲ್ಲಿ ಏ.20 ರಂದು ಆಡೂರು ನಿವಾಸಿ ಕರುಣಾಕರ್ ಎಂಬವರು 25.92 ಲೀಟರ್ ಮದ್ಯವನ್ನು ಮೋಟಾರ್ ಸೈಕಲಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಪುತ್ತೂರು ಅಬಕಾರಿ ಪೊಲೀಸರು ಪತ್ತೆ ಮಾಡಿ ಮದ್ಯವನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿ ಪರಾರಿಯಾಗಿದ್ದರು. ಇದೀಗ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲ ರಾಕೇಶ್ ಮಸ್ಕರೇನ್ಹಸ್ ವಾದಿಸಿದ್ದರು.

LEAVE A REPLY

Please enter your comment!
Please enter your name here