ನಿಡ್ಪಳ್ಳಿ:ಅಕ್ರಮ ಮದ್ಯಸಾಗಾಟ ಪ್ರಕರಣ – ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು:ನಿಡ್ಪಳ್ಳಿ ಗ್ರಾಮದ ಕೂಟೇಲು ಎಂಬಲ್ಲಿ ಏ.4ರಂದು ಆಟೋ ರಿಕ್ಷಾದಲ್ಲಿ ಅಕ್ರಮ ಮದ್ಯಸಾಗಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸುಂದರ ಪೂಜಾರಿ ಎಂಬವರು ಆಟೋ ರಿಕ್ಷಾದಲ್ಲಿ ಮದ್ಯಸಾಗಾಟ ಮಾಡುತ್ತಿದ್ದ ವೇಳೆ ನಿಡ್ಪಳ್ಳಿ ಗ್ರಾಮದ ಕೂಟೇಲು ಎಂಬಲ್ಲಿ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದರು. ಈ ವೇಳೆ ಆರೋಪಿ ಪರಾರಿಯಾಗಿದ್ದರು. ಅಬಕಾರಿ ಪೊಲೀಸರು ಆಟೋ ರಿಕ್ಷಾ ಮತ್ತು ರಿಕ್ಷಾದಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು. ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮೋಹಿನಿ, ನಿಶಾ ವಾದಿಸಿದ್ದರು.

LEAVE A REPLY

Please enter your comment!
Please enter your name here