ಅಕ್ರಮ ಶೇಂದಿ ಸಾಗಾಟ:ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು: ರಿಕ್ಷಾದಲ್ಲಿ ಅಕ್ರಮವಾಗಿ ಶೇಂದಿ ಸಾಗಾಟ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಪಡ್ನೂರು ಗ್ರಾಮದ ಪಡ್ನೂರು ಜಂಕ್ಷನಿನಲ್ಲಿ ಎ.24 ರಂದು ಬೆಳ್ತಂಗಡಿ ನಿವಾಸಿ ಲೋಕೇಶ್ ನಾಯಿಕ್ ಎಂಬವರು ತನ್ನ ರಿಕ್ಷಾದಲ್ಲಿ 350 ಲೀಟರ್ ಶೇಂದಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಅಬಕಾರಿ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಆ ಸಂದರ್ಭ ಆರೋಪಿ ಪರಾರಿಯಾಗಿದ್ದರು. ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲ ರಾಕೇಶ್ ಮಸ್ಕರೇನ್ಹಸ್ ವಾದಿಸಿದ್ದರು.

LEAVE A REPLY

Please enter your comment!
Please enter your name here