ನೆಟ್ಟಾರು ಪತ್ನಿಗೆ ಉದ್ಯೋಗ ಮುಂದುವರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಪುತ್ತಿಲ

0

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಈ ಹಿಂದೆ ನೀಡಿದ್ದ ಸರಕಾರಿ ಕೆಲಸವನ್ನು ಮುಂದುವರಿಸುವಂತೆ ದ.ಕ ಜಿಲ್ಲಾಧಿಕಾರಿ ಎನ್‌ ರವಿ ಕುಮಾರ್‌ ಅವರಿಗೆ ಅರುಣ್‌ ಕುಮಾರ್‌ ಪುತ್ತಿಲ ಪತ್ರ ಬರೆದಿದ್ದಾರೆ. ಯಾವುದೇ ಸರಕಾರ ಆಡಳಿತ ಬದಲಾದರೂ ಇಂತಹ ಕುಟುಂಬಗಳಿಗೆ ಅನ್ಯಾಯವಾಗದಂತೆ ಗಮನ ಹರಿಸಬೇಕು ಮಾತ್ರವಲ್ಲ, ಇವರ ಜೀವನೋಪಾಯಕ್ಕೆ ಮಾನವೀಯ ನೆಲೆಯಲ್ಲಿ ಉದ್ಯೋಗವನ್ನು ಮುಂದುವರಿಸುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು ಪುತ್ತಿಲ ಪತ್ರದಲ್ಲಿ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here