ಬನ್ನೂರು-ಕುಂಟ್ಯಾನ ಸದಾಶಿವ ದೇವಸ್ಥಾನದ ಸಮಿತಿ ಸದಸ್ಯ ಮೌನಿಶ್‌ ಮನೆಯಲ್ಲಿ ಹಾಡಹಗಲೇ ಕಳ್ಳತನ

0

ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್‌ ಎಂಬವರ ಮನೆಯಿಂದ ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.

ಬೆಳಿಗ್ಗೆ ಮನೆಯವರು ಬೀಗ ಹಾಕಿ ಕೆಲಸದ ನಿಮಿತ್ತ ಹೊರ ಹೋಗಿದ್ದು 10 ರಿಂದ 12 ಗಂಟೆ ನಡುವೆ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಮನೆ ಮಂದಿ 12 ಗಂಟೆ ವೇಳೆಗೆ ತಿರುಗಿ ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಯುತ್ತಿದೆ. ಈ ನಡುವೆ ಪೊಲೀಸ್‌ ಶ್ವಾನ ಘಟನಾ ಸ್ಥಳದಿದಂದ ಆನೆಮಜಲು ಕೋರ್ಟು ಸಂಕೀರ್ಣದ ಕಾಮಗಾರಿ ಸ್ಥಳದವರೆಗೂ ಹೋಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here