ಜಿ.ಪಂ., ತಾ.ಪಂ. ಚುನಾವಣೆ: ಮೀಸಲಾತಿ ನಿಗದಿಗೆ 4 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

0

ಪುತ್ತೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ 4 ವಾರಗಳ ಕಾಲಾವಕಾಶ ನೀಡಿದೆ. ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳ ಚುನಾವಣೆ ನಡೆಸಲು ನೂತನ ರಾಜ್ಯ ಸರಕಾರ ಮುಂದಡಿ ಇಟ್ಟಿದೆ. ಇದಕ್ಕೆ ಪೂರಕವೆಂಬಂತೆ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸುವ ವಿಚಾರಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶ ಪಾಲಿಸಲು ಸರಕಾರ 4 ವಾರಗಳ ಸಮಯ ನೀಡುವಂತೆ ಹೈಕೋರ್ಟ್‌ಗೆ ಕೇಳಿದೆ.

ವಿಚಾರಣೆ ವೇಳೆ ಸರಕಾರದ ಪರ ಹಾಜರಾದ ನೂತನ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿಯವರು ಜಿ.ಪಂ. ಮತ್ತು ತಾ.ಪಂ. ಚುನವಣೆಗೆ ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಸಮಯ ಬೇಕು. ಆದ್ದರಿಂದ 4 ವಾರಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಒಪ್ಪಿದ ಹೈಕೋರ್ಟ್ ನ್ಯಾಯ ಪೀಠ ವಿಚಾರಣೆಯನ್ನು ಜೂ. ೨೮ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here