ನರಿಮೊಗರು- ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ

0

ನರಿಮೊಗರು: ಇಲ್ಲಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಯತೀಶ್‌ ಅರ್ವಾರ ಮಾತನಾಡಿ, ನಾವು ಶಾಲೆಯಲ್ಲಿ ಹೇಳುವಂತಹ ಶ್ಲೋಕಕ್ಕೆ ಪೂರಕವಾದ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿ ನೂತನ ಶೈಕ್ಷಣಿಕ ವರ್ಷಕ್ಕೆ ಶುಭಾಶಯ ಕೋರಿದರು. ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ್‌ ಆಚಾರ್‌ ಹಿಂದಾರು ಮಾತನಾಡಿ, ನಾವು ಆಯ್ಕೆ ಮಾಡಿಕೊಂಡ ಯಾವುದೇ ಕ್ಷೇತ್ರವಿರಲಿ ಭವಿಷ್ಯತ್ತಿನಲ್ಲಿ ಯಾರಿಗೂ ತೊಂದರೆ ಕೊಡದಂತಹ ವ್ಯಕ್ತಿಗಳಾಗಿ ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಜೆಗಳಾಗಿ ಇನ್ನೊಬ್ಬರಿಗೆ ಸಹಾಯಹಸ್ತರಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾಸಂಸ್ಥೆಯ ಅಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಮಾತನಾಡಿ, ರಾಮ-ಕೃಷ್ಣರ ಹಾಗೆ ಶ್ರಮ ಪಟ್ಟು ಉತ್ತಮ ಸಾಧನೆ ಮಾಡಿ ಉತ್ತಮ ಅಂಕಗಳನ್ನು ಪಡೆದು ಸುಸಂಸ್ಕೃತ ಮಕ್ಕಳಾಗಿ ಬಾಳಿ ಎಂದರು.

ಈ ಸಂದರ್ಭದಲ್ಲಿ ಆಡಳಿತ ಮಂಡಲಿ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ, ನಿವೃತ ಶಿಕ್ಷಣಾಧಿಕಾರಿ ಎಸ್.ಜಿ.ಕೃಷ್ಣ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯರ‍್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಜಯಮಾಲಾ ವಿ.ಎನ್‌ ಪ್ರಸ್ತಾವನೆಯೊಂದಿಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿದರು. ನಂತರ ಆರತಿ ಬೆಳಗಿ ತಿಲಕವಿಡುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಸ್ವಾಗತ ಮಾಡಲಾಯಿತು.

ಈ ಸಂದರ್ಭದಲ್ಲಿ 2022-23 ನೇ ಸಾಲಿನ 10ನೇ ತರಗತಿಯಲ್ಲಿ ರಾಜ್ಯಕ್ಕೆ ತೃತೀಯ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ವನ್ನು ಗಳಿಸಿದ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ತೇಜಸ್ ಎಸ್ ಆರ್ ಅವರನ್ನು ಗೌರವಿಸಲಾಯಿತು. ಶಿಕ್ಷಕರಾದ ಪ್ರಮೀಳಾ ಸ್ವಾಗತಿಸಿ ,ಸುಕನ್ಯಾ ವಂದಿಸಿದರು.ನೀತು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here