ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಖಚಿತಗೊಳಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

0

ಪುತ್ತೂರು: ಇಂದು ಬೆಂಗಳೂರಿನ ಶಾಂತಿನಗರದ ಕೆಎಸ್ಆರ್‌ಟಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರು ಪಕ್ಷದ ಗ್ಯಾರಂಟಿಯಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭಾಗ್ಯ ದೊರೆಯಲಿದೆ. ಇಂದಿನ ಸಭೆಯಲ್ಲಿ ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ.

ಇವುಗಳನ್ನು ಜೂ.1ರಂದು ಸಂಪುಟ ಸಭೆಯಲ್ಲಿ ಮಂಡಿಸುತ್ತೇನೆ. ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ಪ್ರಣಾಳಿಕೆಯಾಗಿತ್ತು ಅದರಂತೆ ಗ್ಯಾರಂಟಿ ಜಾರಿಯಾಗಲಿದೆ ಎಂದರು. ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here