ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”ಯಕ್ಷಗಾನ ಕಲಾ ಸಂಘ ಉದ್ಘಾಟನೆ

0

ಪುತ್ತೂರು: ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ “ಯಕ್ಷಸಿಂಚನವನ್ನು ಹನುಮಗಿರಿ ಯಕ್ಷಗಾನ ಮೇಳದ ಖ್ಯಾತ ಭಾಗವತರು ರವಿಚಂದ್ರ ಕನ್ನಡಿಕಟ್ಟೆ ಮೇ.27ರಂದು ಉದ್ಘಾಟಿಸಿದರು.ಆ ಬಳಿಕ ಮಾತನಾಡಿದ ಅವರು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಕಾರ್ಯಕ್ರಮಕ್ಕೆ ಶುಭಕೋರಿದರು. ರವಿಚಂದ್ರ ಕನ್ನಡಿಕಟ್ಟೆ ಮತ್ತು ಗಿರೀಶ್ ರೈ ಕಕ್ಕೆಪದವು ಭಾಗವತಿಕೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ಜಯಂತ ನಡುಬೈಲು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಹಾಗೂ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು.

ನವಮಿ ಪ್ರಾರ್ಥಿಸಿ, ಯಕ್ಷಗಾನ ಕಲಾ ಸಂಘದ ಸಂಚಾಲಕಿ ಪ್ರಭಾವತಿ ಕೆ ಸ್ವಾಗತಿಸಿ,ಜೊತೆ ಕಾರ್ಯದರ್ಶಿ ಭವ್ಯಶ್ರೀ ವಂದಿಸಿ,ರೋಹಿತ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯದರ್ಶಿ ಕೀರ್ತನ್ ಮತ್ತು ನರೇಂದ್ರ ಯಕ್ಷಗಾನ ನಾಟ್ಯ ಪ್ರಾತ್ಯಕ್ಷತೆ ನೀಡಿದರು.

LEAVE A REPLY

Please enter your comment!
Please enter your name here