ಕೆಯ್ಯೂರು-ಕೆ.ಪಿ.ಎಸ್‌ ಸ್ಕೂಲ್‌ ಪ್ರಾರಂಭೋತ್ಸವ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು: ಕೆಯ್ಯೂರು ಕೆ.ಪಿ.ಎಸ್‌ ಸ್ಕೂಲ್‌ ಪ್ರಾರಂಭೋತ್ಸವ ಮತ್ತು 19ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಪ್ರಾಯೋಜಿತ ಉಪನ್ಯಾಸ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಶಾಸಕ ಅಶೋಕ್‌ ಕುಮಾರ್‌ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಉಮೇಶ್‌ ನಾಯಕ್‌ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಬಿಎಡ್‌ ಕಾಲೇಜಿನ ಪ್ರಾಂಶುಪಾಲೆ ಶೋಭಿತಾ ಸತೀಶ್‌ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್‌ ಖಾದರ್‌, ಜಯಂತ್‌ ಪೂಜಾರಿ ಕೆಂಗಡೇಲು, 19ನೇ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎ.ಕೆ ಜಯರಾಮ್‌ ರೈ ಸೇರಿದಂತೆ, ದ.ಕ ಜಿಲ್ಲಾ ಸಾಹಿತ್ಯ ಪರಿಷತ್‌, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪಧಾಧಿಕಾರಿಗಳು, ಕೆ.ಐ.ಎಸ್‌ ಅಧ್ಯಾಪಕ ವೃಂದ, ಪೋಷಕರು, ವಿದ್ಯಾರ್ಥಿಗಳು ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here