ಆಂಜನೇಯ ಯಕ್ಷಗಾನ ಕಲಾ ಸಂಘದ ಪತ್ತನಾಜೆ ಕೊನೆಯ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ 2022 – 2023 ಸಾಲಿನ ಕೊನೆಯಕೂಟ( ಪತ್ತನಾಜೆ)ವು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಮೇ .31ರಂದು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ. ” ಜಾಂಬವತಿ ಕಲ್ಯಾಣ ” ಎಂಬ ಆಖ್ಯಾನದ ತಾಳಮದ್ದಳೆ ನಡೆಯಿತು.


ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ ( ಶುಭ ಜೆ ಸಿ ಅಡಿಗ ಮತ್ತು ಶುಭಾ ಗಣೇಶ್ ), ಬಲರಾಮ ( ಹರಿಣಾಕ್ಷಿ ಜೆ ಶೆಟ್ಟಿ ), ಜಾಂಬವ ( ಕಿಶೋರಿ ದುಗ್ಗಪ್ಪ ನಡುಗಲ್ಲು ), ನಾರದ ( ಪ್ರೇಮಲತಾ ಟಿ ರಾವ್ ) ಸಹಕರಿಸಿದರು. ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಪ್ರಾಯೋಜಿಸಿದ್ದರು. ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್, ಅಧ್ಯಕ್ಷ ಭಾಸ್ಕರ್ ಬಾರ್ಯ, ಟಿ.ರಂಗನಾಥ ರಾವ್, ಸುಧಾಮ ಮಣಿಯಾಣಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here