ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿವೃತ್ತರಿಗೆ ಗೌರವಾರ್ಪಣೆ

0

ಪುತ್ತೂರು:ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿರುವ ಪುತ್ತೂರು ನಗರ ಪೊಲೀಸ್ ಠಾಣೆಯ ಎ.ಎಸ್.ಐಗಳಾದ ಲೋಕನಾಥ್ ಕೆ ಮತ್ತು ನಿತ್ಯಾನಂದ ವಿ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಬೀಳ್ಕೊಡಲಾಯಿತು.

ದ.ಕ.ಜಿಲ್ಲಾ ಪ್ರಭಾರ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ.ಅವರು ನಿವೃತ್ತರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಡಿವೈಎಸ್ಪಿ ಡಾ|ಗಾನ ಪಿ ಕುಮಾರ್, ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಸುನಿಲ್ ಸಹಿತ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here