ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿ- ರಾಜ್ಯ ಗುಣ ನಿಯಂತ್ರಣ ಮಾನಿಟರ್ ಪರಿಶೀಲನೆ 

0

ನರಿಮೊಗರು: ಮಹಾತ್ಮ‌ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ‌ ಮಾಡುವ ಸಲುವಾಗಿ ರಾಜ್ಯ ಗುಣ ನಿಯಂತ್ರಣ ಮಾನಿಟರ್ ಎಸ್.ವೈ.ಹೊಂಬಾಳ ಅವರು ಮೇ.29 ರಂದು ಪುತ್ತೂರು ತಾಲೂಕಿನ ವಿವಿಧೆಡೆ ಪರಿಶೀಲನೆ ನಡೆಸಿದರು.

ಪುತ್ತೂರು ತಾಲೂಕಿನ ನರಿಮೊಗರು,ಆರ್ಯಾಪು,ಹಿರೇಬಂಡಾಡಿ ಹಾಗೂ ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್ ಗಳಲ್ಲಿನ ಕಾಮಗಾರಿಗಳನ್ನು ಪರಿಶೀಲಿಸಿದರು.ಈ ಸಂದರ್ಭ ಸಹಾಯಕ ನಿರ್ದೇಶಕರಾದ ಶೈಲಜಾ ಭಟ್, ತಾಂತ್ರಿಕ ಸಂಯೋಜಕರಾದ ವಿನೋದ್ ಕುಮಾರ್, ತಾಂತ್ರಿಕ ಸಹಾಯಕ ಅಭಿಯಂತರರಾದ ಮನೋಜ್ ಕುಮಾರ್, ಶ್ರೀಲಕ್ಷ್ಮೀ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here