ಪುತ್ತೂರು ಸರಕಾರಿ ಆಸ್ಪತ್ರೆಗೆ ಶಾಸಕ ಅಶೋಕ್ ರೈ ಭೇಟಿ-ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ವೈದ್ಯಾಧಿಕಾರಿಗಳಲ್ಲಿ ಮನವಿ

0

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂ.2ರಂದು ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವಿವಿಧ ಸಮಸ್ಯೆಗಳ ಮತ್ತು ರೋಗಿಗಳ ಚಿಕಿತ್ಸೆ ಕುರಿತು ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳಿಗೆ ತೆರಳಿ ಮಾಹಿತಿ ಪಡೆದು ಕೊಂಡರು.


ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ, ಸಹಾಯಕ ಆಡಳಿತಾಧಿಕಾರಿ ಯೋಗಾನಂದ್, ಡಾ. ಜಯದೀಪ್ ಅವರು ಆಸ್ಪತ್ರೆಗಳ ವೈದ್ಯರ ಮತ್ತು ಚಿಕಿತ್ಸಾ ವಿಚಾರಗಳ ಮಾಹಿತಿ ನೀಡಿದರು. ಈ ಸಂದರ್ಭ ಅಶೋಕ್ ರೈ ಅವರು ಆಸ್ಪತ್ರೆಯಲ್ಲಿ ಯಾವುದೆ ಸಮಸ್ಯೆ ಬರಬಾರದು. ಜೊತೆಗೆ ಇಲ್ಲಿ ನಾನು ಹೇಳುವ ಮೊದಲು ನಿಮ್ಮಿಂದ ಏನು ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಬಳಿಕ ಅವರು ಆಸ್ಪತ್ರೆಯ ವೈದ್ಯರ ಮತ್ತು ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಸಭೆ ನಡೆಸಿದರು.

LEAVE A REPLY

Please enter your comment!
Please enter your name here