ಕಾಣಿಯೂರು ಪ್ರಗತಿಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಇವರಿಂದ ಶಿಕ್ಷಕರಿಗೆ ಸಮವಸ್ತ್ರ ವಿತರಣೆ

0

ಕಾಣೆಯೂರು: ವಿದ್ಯಾರ್ಥಿಗಳಿಗೆ ಆದರ್ಶಪ್ರಾಯರಾದ ಶಿಕ್ಷಕ ವೃಂದದವರು ಕೂಡ ಸಮವಸ್ತ್ರವನ್ನು ಧರಿಸುವ ಮೂಲಕ ನಮ್ಮಲ್ಲಿರುವ ಒಗ್ಗಟ್ಟು ಸಮಾನತೆ ಮತ್ತು ಶಿಸ್ತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು. ಅವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರಿಗೆ ಜೂ.2ರಂದು ಸಮವಸ್ತ್ರ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ. ಬಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here