ವಿಟ್ಲ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಆರೋಪ – ಪ್ರಕರಣ ದಾಖಲು

0

ವಿಟ್ಲ: ಹಳೇ ಧ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ತಾಲೂಕು ಮಣಿ ನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಅಬ್ದುಲ್ ಹಮೀದ್ ರವರ ಪುತ್ರ ಮಹಮ್ಮದ್ ಸರ್ವನ್( 27 ವ.) ದೂರುದಾರರಾಗಿದ್ದು,
ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್, ಹಾಗೂ ಇತರ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಲದಿನಗಳ ಹಿಂದೆ ನಾನು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜಸೀಲ್‌ ತನ್ನ ಮೋಟಾರ್ ಸೈಕಲ್ ನಲ್ಲಿ ರಾಂಗ್ ಸೈಡ್ ಬಂದು ಅಡ್ಡಗಟ್ಟಿ ಹಳೆಯ ದ್ವೇಷದಿಂದ ನನಗೆ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹೊಡೆದು ತೆರಳಿದ್ದರು‌. ಇದೇ ದ್ವೇಷದ ಹಿನ್ನೆಲೆಯಲ್ಲಿ ಜೂ.2ರಂದು ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ದರ್ಗಾದ ಬಳಿ ನಾನು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್, ಹಾಗೂ ಇತರೆ ಮೂವರು ಸೇರಿಕೊಂಡು ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿ ಪರಾರಿಯಾಗಿದ್ದಾರೆ. ಇದೇ ವೇಳೆ ತಡೆಯಲು ಬಂದ ನನ್ನ ಜೊತೆಗಿದ್ದ ಫಾರುಕ್ ನಿಗೂ ತಂಡ ಹಲ್ಲೆ ನಡೆಸಿದೆ ಎಂದು ಮಹಮ್ಮದ್ ಸರ್ವನ್ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here