ಪಂಜಳ: ಲಾರಿ ಮತ್ತು ಬೈಕ್ ಡಿಕ್ಕಿ- ಬೈಕ್ ಸವಾರರಿಗೆ ಗಾಯ

0


ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಗ್ರಾಮದ ಪಂಜಳ ಎಂಬಲ್ಲಿ ಜೂ.2ರಂದು ಸಂಭವಿಸಿದೆ.
ಬೈಕ್ ಸವಾರ ಮಹಮ್ಮದ್ ಅನೀಸ್ ಹಾಗೂ ಸಹ ಸವಾರ ಹಮೀದ್ ಎಂಬವರು ಗಾಯಗೊಂಡು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ನೀರಕಟ್ಟೆಯಿಂದ ಬೈಕ್‌ನಲ್ಲಿ ಉಪ್ಪಿನಂಗಡಿಗೆ ಬರುತ್ತಿದ್ದವರು ಪಂಜಳ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಇನ್ನೊಂದು ಬೈಕ್‌ನಲ್ಲಿ ಬರುತ್ತಿದ್ದ ಸವಾರನಿಗೆ ನಮಸ್ಕರಿಸುತ್ತಾ ಹೆದ್ದಾರಿಯ ಪೂರ್ತಿ ರಾಂಗ್ ಸೈಡಿಗೆ ಬಂದ ಪರಿಣಾಮ ಮಹಮ್ಮದ್ ಆಶಿಫ್ ಎಂಬವರು ಬಿ.ಸಿ ರೋಡ್ ಕಡೆಯಿಂದ ನೀರಕಟ್ಟೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯ ಮುಂಭಾಗದ ಬಲಬದಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕ ಬಂಟ್ವಾಳ ತಾಲೂಕಿನ ಬಿಮೂಡ ಗ್ರಾಮದ ಪರಳ್ಯಮದ್ದ ನಿವಾಸಿ ಮಹಮ್ಮದ್ ಆಶಿಫ್ ಅವರು ನೀಡಿದ ದೂರಿನಂತೆ ಬೈಕ್ ಸವಾರ ಮಹಮ್ಮದ್ ಅನೀಸ್ ವಿರುದ್ಧ ಪುತ್ತೂರು ಸಂಚಾರ ಠಾಣೆಯಲ್ಲಿ ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here