![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜೊತೆಜೊತೆಗೆ ವಿದ್ಯುತ್ ದರ ಏರಿಸುವ ಮೂಲಕ ಶಾಕ್ ನೀಡಿದೆ. ಪ್ರತಿ ಯುನಿಟ್ ಗೆ 70 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದೆ.
![](https://puttur.suddinews.com/wp-content/uploads/2023/06/d4c56a2f-4c18-4d58-a488-fb1dbd028d49.jpg)
ಎಪ್ರಿಲ್ ತಿಂಗಳಿನಲ್ಲಿಯೇ ಪ್ರತೀ ಯುನಿಟ್ ಗೆ 70 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿತ್ತು. ಆದರೆ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಆದೇಶವನ್ನು ತಡೆ ಹಿಡಿಯಲಾಗಿತ್ತು. ಈಗ ಸಿದ್ದರಾಮಯ್ಯ ನೇತೃತ್ವದ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದು, ಜುಲೈ 1ರಿಂದ ಹೊಸ ಪರಿಷೃತ ದರ ಜಾರಿಯಾಗಲಿದೆ. ಆದಾಯದ ಕೊರತೆ ಮತ್ತು ನಷ್ಟವನ್ನು ಸರಿದೂಗಿಸಲು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿದೆ ಎನ್ನಲಾಗಿದೆ.