ನವ ಕರ್ನಾಟಕ ಉಭಯ ಸಂಘದಿಂದ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿ ಪರಿಸರ ಸ್ವಚ್ಛತೆ

0


ಪುತ್ತೂರು: ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಮತ್ತು ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಗುಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಜೂ.4ರಂದು ನಡೆಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಕೆ ಜಯರಾಮ ಕುಲಾಲ್, ಉಪಾಧ್ಯಕ್ಷ ಈಶ್ವ ನಾಯ್ಕ, ಕೋಶಾಧಿಕಾರಿ ಕೇಸರಿ ಕೊಪ್ಪಳ, ಜೊತೆ ಕಾರ್ಯದರ್ಶಿಗಳಾದ ಚೆನ್ನಪ್ಪ ಮಚ್ಚಿಮಲೆ, ವಿಶ್ವನಾಥ್ ಬೆಳ್ಳಿಪ್ಪಾಡಿ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ಜೊತೆ ಕಾರ್ಯದರ್ಶಿ ವೆಂಕಟೇಶ್ ಸಹಿತ ಎರಡೂ ಸಂಘಟನೆಗಳ ಸದಸ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ಅನುರಾಗ ವಠಾರದಲ್ಲಿ ಮಾಸಿಕ ಸಭೆ ನಡೆಯಿತು.

LEAVE A REPLY

Please enter your comment!
Please enter your name here