ತೆಕ್ಕಾರು – ಗ್ರಾಮ ಪಂಚಾಯತಿ ಸಿಬ್ಬಂದಿಗಳಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗೆ ಮನವಿ

0

ಪುತ್ತೂರು : ತೆಕ್ಕಾರು ಪಂಚಾಯತ್ ಸಿಬ್ಬಂದಿಗಳ ಮೇಲೆ ಪಂಚಾಯತ್ ಸದಸ್ಯ ನಡೆಸಿದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಸಂತ್ರಸ್ತರ ವಿರುದ್ಧವೇ ಆರೋಪಿಗಳು ಜಾತಿನಿಂದನೆ ಕೇಸು ದಾಖಲಿಸಿದ್ದಾರೆ.


ಇದನ್ನು ಗಂಭೀರವಾಗಿ ಪರಿಗಣಿಸಿರುವ ಪಂಚಾಯತ್ ಸಿಬ್ಬಂದಿಗಳು, ತಮ್ಮ ಮೇಲೆ ಮಾಡಿದ ಸುಳ್ಳು ಕೇಸುಗಳನ್ನು ತಕ್ಷಣವೇ ಹಿಂಪಡೆಯಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಪಂಚಾಯತ್ ಕಚೇರಿಗೆ ಸಂಬಂಧಿಸಿದ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳನ್ನು ನಡೆಸದೆ ಪ್ರತಿಭಟನೆ ನಡೆಸುವುದಾಗಿ ಹೇಳಿರುವ ತೆಕ್ಕಾರು ಪಂಚಾಯತ್ ಸಿಬ್ಬಂದಿಗಳು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here