ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

0

ಪುತ್ತೂರು: ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.


ಪುತ್ತೂರು ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರಕ್ಕೆ ಒತ್ತಡ ತರಲಾಗುತ್ತಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ಮಂಗಳೂರು ಕಮಿಷನರ್ ವ್ಯಾಪ್ತಿಗೆ ಒಳಪಡುವ ಕಾರಣ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ಕುಮಾರ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆಯಿದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here