ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಕೇಸ್ ಹಿಂಪಡೆಯುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಎಲ್ಲಾ ಕೇಸುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರವರಿಗೆ ಮನವಿ ಮಾಡಿದ್ದಾರೆ.‌


ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಅನೇಕ ರಾಜಕೀಯ ಪ್ರೇರಿತ ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಬಿಜೆಪಿ ಸರಕಾರದ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ, ಧರಣಿ ಹಾಗೂ ಪ್ರತಿಭಟನಾ ರ್ಯಾಲಿಗಳನ್ನು ಮಾಡುವ ವೇಳೆ ಅವರ ವಿರುದ್ಧ ರಾಜಕೀಯ ಪ್ರೇರಿತವಾಗಿ ಕೇಸುಗಳನ್ನು ದಾಖಲಿಸಲಾಗಿದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾದ ಎಲ್ಲಾ ಕೇಸುಗಳನ್ನು ಮರು ತನಿಖೆ ಮಾಡಬೇಕು ಮತ್ತು ಅವರ ಮೇಲಿನ ಕೇಸುಗಳನ್ನು ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here