ವಿಟ್ಲ: ಅಡ್ಡಬಂದ ದನ- ರಿಕ್ಷಾ ಪಲ್ಟಿ-50ಲೀ ಹಾಲು ರಸ್ತೆಗೆ

0

ಪುತ್ತೂರು: ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ದನವೊಂದು  ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು  ಜಖಂಗೊಂಡ ಘಟನೆ ಜೂ.6ರಂದು ನಡೆದಿದೆ.

ತೋರಣಕಟ್ಟೆಯಿಂದ  ಪರಿಯಲ್ತಡ್ಕಕ್ಕೆ ಆಜೇರು ನಿವಾಸಿ ಶಾಂತಾರಾಮ ರಾವ್ ಎಂಬವರು ರಿಕ್ಷಾದಲ್ಲಿ  ಹಾಲು ಸಾಗಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಇಳಿಜಾರು ಪ್ರದೇಶದಲ್ಲಿ ರಸ್ತೆಗೆ ಏಕಾಏಕಿ ದನ ಅಡ್ಡ ಬಂದಿದ್ದು, ತಪ್ಪಿಸಲು ಹೋಗುವ ಸಂದರ್ಭ ರಿಕ್ಷಾ ರಸ್ತೆಯ ಪಕ್ಕಕ್ಕೆ ಮಗುಚಿದೆ ಎಂದು ಹೇಳಲಾಗಿದೆ.ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50 ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here