ಜೂ.8:ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್ ‘ಕೃತ್ವ’

0

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ.


ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್ ಆಫೀಸರ್ ಪ್ರೊ|ವೈ ಸಂಗಪ್ಪರವರು ಫೆಸ್ಟ್ ಅನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ ಕಾರ್ಪೋರೇಟರ್ ಹಾಗೂ ಕುಳಾಯಿ ಫೌಂಡೇಶನ್ ನ ಸ್ಥಾಪಕರು, ಅಧ್ಯಕ್ಷರೂ ಆಗಿರುವ ಪ್ರತಿಭಾ ಕುಳಾಯಿ, ಪುತ್ತೂರು ಕೆನರಾ ಬ್ಯಾಂಕಿನ ರೀಜನಲ್ ಮ್ಯಾನೇಜರ್ ವೈ ನರೇಂದ್ರ ರೆಡ್ಡಿರವರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರಿನ ವಿಝ್ಡಮ್ ಎಡ್ ನ ಡಾ|ಗುರು ತೇಜ್, ಪುತ್ತೂರು ಸ್ನೇಹ ಸಿಲ್ಕ್ಸ್ ನ ಮಾಲಕ ಸತೀಶ್ ಎಸ್.ರವರು ಭಾಗವಹಿಸಲಿದ್ದಾರೆ ಎಂದು ಅಕ್ಷಯ ಕಾಲೇಜಿನ ಫೆಸ್ಟ್ ಇದರ ಸಂಯೋಜಕ ರಕ್ಷಣಾ ಟಿ.ಆರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ, ಕಾರ್ಯದರ್ಶಿ ಲಿಖಿತ್ ಎ.ವಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here