ಜೂ.10: ಮುಂಡೂರು ಕುಕ್ಕಿನಡ್ಕ ದೇವಳದ ವಠಾರದಲ್ಲಿ ಸಾರ್ವಜನಿಕ ಶನಿಪೂಜೆ – ಸಮಿತಿ ರಚನೆ

0

ಪುತ್ತೂರು: ಮುಂಡೂರು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಜೂ.10 ರಂದು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀ ಶನಿಪೂಜೆಗೆ ಸಮಿತಿ ರಚನೆ ಮಾಡಲಾಗಿದೆ.


ಮುಂಡೂರು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಆಳ್ವ ಪಟ್ಟೆ, ಕಾರ್ಯದರ್ಶಿಯಾಗಿ ಸಚಿನ್ ಶೆಟ್ಟಿ ಮತ್ತು ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ ಆಯ್ಕೆಗೊಂಡಿದ್ದಾರೆ. ಜೂ.10 ರ ಸಂಜೆ ಗಂಟೆ 5 ಕ್ಕೆ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ಉಪಸ್ಥಿತಿಯಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನಿಪೂಜೆ ನಡೆಯಲಿದೆ. ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here