ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

0

ಪುತ್ತೂರು: ಪುತ್ತೂರು ಹಾಗೂ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ನೇಮಕಾತಿಗಾಗಿ ಜೂ.8ರಿಂದ 22ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪುತ್ತೂರು ತಾಲೂಕಿನ ಬನ್ನೂರು, ಕಡಬ ತಾಲೂಕಿನ ಕೊಣಾಜೆ ಹಾಗೂ ನೆಲ್ಯಾಡಿ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇದ್ದು, ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಜೂ.22ರಂದು ಅಪರಾಹ್ನ 5.30ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಶೇ.40ರಷ್ಟು ಅಂಗವಿಕಲತೆ ಹೊಂದಿರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಅರ್ಜಿ ಆಹ್ವಾನಿಸಿದ ಗ್ರಾಮ ಪಂಚಾಯತ್ ನಿವಾಸಿ ಧೃಢೀಕರಣ ಹೊಂದಿರಬೇಕು. ಅರ್ಜಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್‌ನಲ್ಲಿ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಅಥವಾ ದೂರವಾಣಿ 08251230388, 298788 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here