ಪುತ್ತೂರು ಬಂಟರ ಸಂಘದಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: ಪುತ್ತೂರು ಬಂಟರ ಸಂಘದಿಂದ ಕಳೆದ ಎಪ್ರಿಲ್ 2023 ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅದೇ ತರಗತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅಂತ್ಯೋದಯ ಕಾರ್ಡ್ 60 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಮತ್ತು ಬಿ.ಪಿ.ಎಲ್ ಕಾರ್ಡ್ 70 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಸ್ವಜಾತಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ಅರ್ಜಿಯನ್ನು ಬಂಟರ ಸಂಘ ಪುತ್ತೂರು ಕಛೇರಿಯಿಂದ ಪಡೆದುಕೊಂಡು ಅರ್ಜಿಯಲ್ಲಿ ತಿಳಿಸಿದಂತೆ ಮಾಹಿತಿಯನ್ನು ಭರ್ತಿಮಾಡಿ ಹಾಗೂ ವಾರ್ಷಿಕ ಪರೀಕ್ಷೆಯ ಅಂಕ ಪಟ್ಟಿ, ಆರ್ಥಿಕವಾಗಿ ಹಿಂದುಳಿದವರಿಗೆ ಅಂತ್ಯೋದಯ / ಬಿ.ಪಿ.ಎಲ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಕರಿಸಿ ಜೂನ್ 13, 2023ರೊಳಗಾಗಿ ಬಂಟರ ಸಂಘದ ಕಛೇರಿಗೆ ತಲುಪಿಸಬೇಕು. ಪೂರ್ಣ ದಾಖಲಾತಿ ಇಲ್ಲದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಶ್ರೀ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ ರವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊಬೈಲ್ ನಂ.9449104399, 9448548359, 9591889368 ಹಾಗೂ 9900606690 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here