ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಆರ್ ರವಿರಾವ್ ನಿಧನ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಆರ್ ರವಿರಾವ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.7ರಂದು ನಿಧನರಾಗಿದ್ದಾರೆ.

1965 ರಲ್ಲಿ ವಿವೇಕಾನಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇರ್ಪಡೆಗೊಂಡಿರುವ ಇವರು ನಂತರ ವಿಭಾಗ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು 34ವರ್ಷಗಳ ಕಾಲ ವಿವೇಕಾನಂದ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದ ಇವರು 2000ನೇ ಇಸವಿಯಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿಗೊಂಡಿದ್ದರು.

ಮೂಲತಃ ಉಡುಪಿಯವರಾಗಿದ್ದು ವಿದ್ಯಾರ್ಥಿಗಳಿಗೆ ನೆಚ್ಚಿನ ಉಪನ್ಯಾಸಕರಾಗಿದ್ದರು.ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಬಂಧುಗಳು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here